ಗಾಜಾ ಮೇಲಿನ ದಾಳಿಗೆ ಕದನ ವಿರಾಮ ಇಲ್ಲ, ಆದ್ರೆ ಇಸ್ರೇಲ್‌ ಹೊಸ ಪ್ಲಾನ್‌ ಏನು ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಸ್ರೇಲ್‌ ಮತ್ತು ಹಮಾಸ್‌ ಉಗ್ರರ ನಡುವಿನ ಸಂಘರ್ಷ ಮುಂದುವರೆದಿದೆ. ಹಮಾಸ್‌ ಉಗ್ರರನ್ನು ನಿರ್ಣಾಮ ಮಾಡಿಯೇ ತೀರುತ್ತೇವೆ ಎಂದು ಇಸ್ರೇಲ್‌ ಪಣತೊಟ್ಟಿದೆ. ಆದರೆ ಇಸ್ರೇಲ್‌ ಕದನ ವಿರಾಮ ಘೋಷಿಸಬೇಕು ಎಂದು ವಿಶ್ವಸಂಸ್ಥೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್‌ ಹೊಸ ಪ್ಲಾನ್‌ ಮಾಡಿದೆ.

ಕದನ ವಿರಾಮಕ್ಕೆ ಒಪ್ಪದ ಇಸ್ರೇಸ್‌, ಉತ್ತರ ಗಾಜಾದಲ್ಲಿ ಪ್ರತಿದಿನ ನಾಲ್ಕು ಗಂಟೆ ಯುದ್ಧ ನಿಲ್ಲಿಸಲಾಗುವುದು ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದಾರೆ.

ನಾವು ಪ್ಯಾಲೆಸ್ತೀನ್‌ ನಾಗರಿಕರನ್ನು ಬೇರೆಡೆ ಸ್ಥಳಾಂತರಿಸಲು, ಅವರನ್ನು ನಿರಾಶ್ರಿತರನ್ನಾಗಿ ಮಾಡಲು ಬಯಸುವುದಿಲ್ಲ. ಹಾಗಾಗಿ ಉತ್ತರ ಗಾಜಾದಲ್ಲಿ ಪ್ರತಿ ದಿನ ನಾಲ್ಕು ಗಂಟೆ ಯುದ್ಧ ನಿಲ್ಲಿಸುತ್ತೇವೆ. ಇದು ಗಾಜಾ ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅನುಕೂಲವಾಗಲಿವೆ ಎಂದು ತಿಳಿಸಿದ್ದಾರೆ.

ಹಮಾಸ್‌ನೊಂದಿಗೆ ಕದನ ವಿರಾಮ ಎಂದರೆ, ಹಮಾಸ್‌ಗೆ ಶರಣಾದಂತೆ, ಉಗ್ರವಾದಕ್ಕೆ ಶರಣಾದಂತೆ. ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೂ ಕದನ ವಿರಾಮ ಇಲ್ಲ ಎಂದು ನೆತನ್ಯಾಹು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!