ಇಸ್ರೇಲ್-ಹಿಜ್ಬುಲ್ಲಾ ಸಂಘರ್ಷ: ಲೆಬೆನಾನ್‌ಗೆ ಪ್ರಯಾಣಿಸದಂತೆ ಭಾರತೀಯ ನಾಗರಿಕರಿಗೆ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಇಸ್ರೇಲ್ ಹಾಗೂ ಹಿಜ್ಬುಲ್ಲಾ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಲೆಬೆನಾನ್‌ಗೆ ಪ್ರಯಾಣಿಸದಂತೆ ಬೈರೂತ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಗುರುವಾರ ಸೂಚನೆ ನೀಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಭಾರತೀಯ ರಾಯಭಾರ ಕಚೇರಿ, ಲೆಬನಾನ್‍ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ದೇಶವನ್ನು ತೊರೆಯುವಂತೆ ಸಲಹೆ ನೀಡಿದೆ. ಅಲ್ಲದೇ ಕಾರಣಾಂತರಗಳಿಂದ ಲೆಬನಾನ್‍ನಲ್ಲೇ ಉಳಿದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ ಹೇಳಿದೆ.

ಬೈರೂತ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕಕ್ಕಾಗಿ ಇಮೇಲ್ ಐಡಿ [email protected] ಅಥವಾ ತುರ್ತು ದೂರವಾಣಿ ಸಂಖ್ಯೆ +96176860128ಕ್ಕೆ ಕರೆ ಮಾಡುವಂತೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!