ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ತನ್ನ ರಕ್ಷಣೆಯ ಹಕ್ಕನ್ನು ನಾವು ಬೆಂಬಲಿಸುತ್ತೇವೆ. ಉಗ್ರರು ಅಮಾಯಕರ ವಿರುದ್ಧ ನಡೆಸಿದ ಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಅವರ ಅರಿವಿಗೆ ಬರಬೇಕು ಎಂದು ಇಸ್ರೇಲ್ ಹೇಳಿದೆ.
ಈ ಬಗ್ಗೆ ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ ʻಆಪರೇಷನ್ ಸಿಂಧೂರʼ ಕಾರ್ಯಾಚರಣೆಯನ್ನು ಬೆಂಬಲಿಸಿದೆ. ಭಾರತ – ಪಾಕ್ ನಡುವಿನ ಉದ್ವಿಗ್ನತೆಗೆ ಪ್ರತಿಕ್ರಿಯಿಸಿರುವ ಫ್ರಾನ್ಸ್, ಭಯೋತ್ಪಾದನೆಯ ಪಿಡುಗಿನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಭಾರತದ ಬಯಕೆಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಆದರೆ ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಮಸ್ಯೆ ಉಲ್ಬಣಗೊಳ್ಳುವುದನ್ನು ತಪ್ಪಿಸಲು ಮತ್ತು ನಾಗರಿಕರನ್ನು ರಕ್ಷಿಸಲು ಸಂಯಮದಿಂದ ವರ್ತಿಸುವಂತೆ ಕರೆ ನೀಡುತ್ತೇವೆ ಎಂದು ಫ್ರೆಂಚ್ ವಿದೇಶಾಂಗ ಸಚಿವ ಜೀನ್-ನೋಯೆಲ್ ಬ್ಯಾರಟ್ ತಿಳಿಸಿದ್ದಾರೆ.