ಚಂದ್ರಯಾನ-3 ಯಶಸ್ಸಿನ ಬಳಿಕ ಶುಕ್ರ ಗ್ರಹದತ್ತ ಗಮನ ಹರಿಸಿದ ಇಸ್ರೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂದ್ರಯಾನ-3 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶುಕ್ರ ಗ್ರಹವನ್ನು ಅನ್ವೇಷಿಸಲು ಹೊರಟಿದೆ ಎಂದು ಇಸ್ರೋ ಅಧ್ಯಕ್ಷ ಸೋಮನಾಥ್ ಸ್ಪಷ್ಟಪಡಿಸಿದರು. ಚಂದ್ರಯಾನ-3, ಆದಿತ್ಯ ಎಲ್1 ಮಿಷನ್ ನಂತರ ಇಸ್ರೋ ಶುಕ್ರ ಮಿಷನ್ ಅನ್ನು ಕೈಗೆತ್ತಿಕೊಳ್ಳಲಿದೆ ಎಂದು ಸೋಮನಾಥ್ ಹೇಳಿದ್ದಾರೆ. ಸೌರವ್ಯೂಹದ ಅತ್ಯಂತ ಪ್ರಕಾಶಮಾನವಾದ ಗ್ರಹ ಶುಕ್ರ ಗ್ರಹಕ್ಕೆ ಭಾರತವು ಮಿಷನ್ ಅನ್ನು ಕೈಗೊಳ್ಳಲಿದೆ ಎಂದು ಮಂಗಳವಾರ ಪ್ರಕಟಿಸಿದರು.

ಚಂದ್ರಯಾನ-3ರ ಯಶಸ್ವಿ ಉಡಾವಣೆಯು ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯತ್ನಗಳಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ. ದೆಹಲಿಯಲ್ಲಿ ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯನ್ನು ಉದ್ದೇಶಿಸಿ ಮಾತನಾಡಿದ ಸೋಮನಾಥ್, ಶುಕ್ರ ಯಾನವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಶುಕ್ರನ ಮನೆಯನ್ನು ಅಧ್ಯಯನ ಮಾಡುವುದರಿಂದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ ಎಂದರು.

“ಶುಕ್ರವು ತುಂಬಾ ಆಸಕ್ತಿದಾಯಕ ಗ್ರಹವಾಗಿದೆ, ಅದರ ವಾತಾವರಣದ ಒತ್ತಡವು ಭೂಮಿಯ 100 ಪಟ್ಟು ಹೆಚ್ಚು” ಎಂದು ಹೇಳಿದರು. ನಾಸಾ 2029, 2030 ಮತ್ತು 2031 ರಲ್ಲಿ ಭವಿಷ್ಯದ ಶುಕ್ರ ಕಾರ್ಯಾಚರಣೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ ಎಂಬುದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!