ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಕ್ಷಣ ಎಲ್ಲ ಪಕ್ಷದಲ್ಲಿ ಟೆಕೆಟ್ ಗಾಗಿ ಲಾಬಿ ಶುರುವಾಗಿದ್ದು, ಇದರ ನಡುವೆ ಕಾಂಗ್ರೆಸ್ಗೆ ಸೇರಿದವರೆಲ್ಲರಿಗೂ ಟಿಕೆಟ್ ಕೊಡಬೇಕು ಎಂದರೆ ಆಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಶುಕ್ರವಾರ ಹೇಳಿದ್ದಾರೆ.
ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿರುವ ಸಂದರ್ಭದಲ್ಲೇ ಆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣ ಎಂದರೆ ಫುಟ್ಬಾಲ್ ಅಲ್ಲ, ಚೆಸ್ ಗೇಮ್ ಇದ್ದಂತೆ. ಕಾಂಗ್ರೆಸ್ಗೆ ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುವುದಾಗಿ ಹೇಳಿರಲಿಲ್ಲ. ಬೇಷರತ್ ಆಗಿ ಪಕ್ಷಕ್ಕೆ ಸೇರಿಸಿಕೊಂಡಿದ್ದೆವು. ಪಕ್ಷಕ್ಕೆ ಸೇರಿದವರೆಲ್ಲರಿಗೂ ಟಿಕೆಟ್ ಕೊಡಲು ಆಗುವುದಿಲ್ಲ. ಅಸಮಾಧಾನ ಇರುವವರನ್ನು ಕರೆದು ಮಾತನಾಡುತ್ತೇವೆ, ಸರಿಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಚಿಕ್ಕಮಗಳೂರಿನ ಕಡೂರು ಕ್ಷೇತ್ರದಲ್ಲಿ ವೈಎಸ್ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್ ದೊರೆಯಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಕಡೂರು ಕ್ಷೇತ್ರದಿಂದ ಆನಂದ್ ಅವರಿಗೆ ಟಿಕೆಟ್ ಘೋಷಸಲಾಗಿತ್ತು. ಇದಕ್ಕೆ ದತ್ತಾ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದರು.