ಹೊಸ ದಿಗಂತ ವರದಿ, ಹುಬ್ಬಳ್ಳಿ:
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ವಿಚಾರದಲ್ಲಿ ಹೈಕಮಾಂಡ ತೆಗೆದುಕೊಂಡಿರುವ ನಿರ್ಧಾರವನ್ನು ನಾವು ಸ್ವಾಗತ ಮಾಡುತ್ತೇವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ . ಎಲ್ಲರೂ ಸೇರಿ ಪಕ್ಷ ಸಲುವಾಗಿ ದುಡಿಯುತ್ತೇವೆ. ಜಗದೀಶ ಶೆಟ್ಟರ ಪಕ್ಷಕ್ಕೆ ಬಂದಿರುವುದು ಖುಷಿಯ ಸಂಗತಿಯಾಗಿದೆ. ಬಿಜೆಪಿ ಕಾರ್ಯ ಕರ್ತರು ಶೆಟ್ಟರ ಹೋದಾಗ ಗಟ್ಟಿತನದಿಂದ ಇಲ್ಲಿಯೇ ಇದ್ದರು. ಈಗಲೂ ಅವರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ಧಾರವಾಡ ಲೋಕಸಭಾ ಸ್ಪರ್ಧಿಸುವ ವಿಚಾರವಾಗಿ ಯಾವುದೇ ಊಹಾಪೋಹಗಳಿಲ್ಲ. ನಮ್ಮ ನಾಯಕರು ಯಾವತ್ತಿದ್ದರೂ ಪ್ರಹ್ಲಾದ ಜೋಶಿಯಾಗಿದ್ದಾರೆ. ಈ ಬಾರಿ ಅವರು ಸ್ಪರ್ಧಿಸಲಿದ್ದು, ದೊಡ್ಡ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.