ಸಿದ್ದರಾಮಯ್ಯರನ್ನು ಹೋಲಿಕೆ ಮಾಡೋದು ಅಸಾಧ್ಯ: ಡಾ. ಜಿ. ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುರುಬ ಸಮುದಾಯ ಹಾಗೂ ರಾಜ್ಯಕ್ಕೆ ಸಿದ್ದರಾಮಯ್ಯರ ಕೊಡುಗೆ ಅಪಾರ. 16 ಬಜೆಟ್ ಮಂಡಿಸಿರುವುದರ ಜೊತೆಗೆ ಸಿಎಂ ಸಾಧನೆ ತುಂಬಾ ಇದೆ. ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರನ್ನು ಯಾರೊಂದಿಗೂ ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಕರ್ನಾಟಕದ ರಾಜಕಾರಣ ಹೊಸ ದಿಕ್ಕನ್ನು ಪಡೆದುಕೊಳ್ಳುತ್ತಿದ್ದು. ದೇಶಕ್ಕೆ ಒಂದು ಮಾದರಿ ತೀರ್ಮಾನ ಆಗಲಿದೆ ಎಂದು ಪರೋಕ್ಷವಾಗಿ ಜಾತಿಗಣತಿ ವಿಚಾರವನ್ನು ಪರಮೇಶ್ವರ್ ಪ್ರಸ್ತಾಪಿಸಿದರು.

ಕುರುಬ ಸಮುದಾಯ ದೇಶದಲ್ಲಿ ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಇದೆ. ಇದು ಸಾಮಾನ್ಯವಾದ ಸಮುದಾಯ ಅಲ್ಲ ಸಿಎಂ ಕೂಡ ಅದೇ ಸಮುದಾಯದವರು ಎನ್ನುವುದು ಹೆಮ್ಮೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!