ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಎರಡನೇ ಬಜೆಟ್ ಮಂಡಿಸುತ್ತಿರುವುದು ನನ್ನ ಸೌಭಾಗ್ಯ : ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಜನತೆ ಎದುರು ನೋಡುತ್ತಿರುವ ಬಹುನಿರೀಕ್ಷಿತ ಬಜೆಟ್ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಇದು ಎರಡನೇ ಬಜೆಟ್‌ ಮಂಡಿಸುತ್ತಿರುವುದು ನನ್ನ ಸೌಭಾಗ್ಯ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಟ್ವೀಟ್ಟರ್‌ ನಲ್ಲಿ ಬೊಮ್ಮಾಯಿ, “ರಾಜ್ಯದ ಮುಖ್ಯಮಂತ್ರಿ ಇಂದು ಏರಡನೇ ಬಜೆಟ್ ಮಂಡಿಸುತ್ತಿರುವುದು ನನ್ನ ಸೌಭಾಗ್ಯವಾಗಿದೆ. ಇದರ ಪ್ರಯುಕ್ತ ಬೆಂಗಳೂರಿನ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕರ್ನಾಟಕದ ಸಮಸ್ತ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಲಾಯಿತು‌.” ಎಂದು ಟ್ವೀಟ್‌ ಮಾಡಿದ್ದಾರೆ.

ಇಂದು ಬೆಳಗ್ಗೆ 10.15ಕ್ಕೆ‌ ಬಜೆಟ್ ಮಂಡನೆಯಾಗಲಿದ್ದು, ಆರ್ಥಿಕ ಸಚಿವರು ಕೂಡ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಬಾರಿ ರಾಜ್ಯ ಸರ್ಕಾರದ ಕೊನೆಯ ಬಜೆಟ್‌ ಅನ್ನು ಮಂಡಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!