ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿಪ್ಪು ಅಂದ್ರೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಬಹಳ ಪ್ರೀತಿ. ಅವರು ಹಿಂದುಗಳನ್ನು ಎರಡನೇ ದರ್ಜೆ ಥರಾ ನೋಡ್ತಾ ಇದ್ದಾರೆ. ಸಿದ್ದರಾಮಯ್ಯ ಅವರು ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದರು.
ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಮುಸ್ಲಿಂ ಮತಕ್ಕಾಗಿ ಸಿದ್ಧರಾಮಯ್ಯ ಈ ರೀತ ರಾಜಕಾರಣ ಮಾಡುತ್ತಿದ್ದಾರೆ. ಅವರು ಮುಸ್ಲಿಮರ ಓಲೈಕೆ ಜೊತೆಗೆ ಟಿಪ್ಪು ಜಯಂತಿ, ಶಾದಿ ಭಾಗ್ಯ, ಇವೆಲ್ಲಾ ಕೈ ಬಿಡಬೇಕು ಎಂದರು.
ರಾಜ್ಯದಲ್ಲಿ 13 ತಾಲೂಕು ಬಿಟ್ರೆ ಉಳಿದ ಎಲ್ಲಾ ಕಡೆ ಬರಯಿದೆ. ಈ ಸಮಯದಲ್ಲಿ ಸರ್ಕಾರಕ್ಕೆ ತಾಯಿ ಹೃದಯ ಇರಬೇಕಿತ್ತು. ಆದ್ರೆ ಸರ್ಕಾರಕ್ಕೆ ಕಟುಕನ ಹೃದಯವಿದೆ. ಬರ ನಿರ್ವಹಣೆ ಮಾಡೋದು ಬಿಟ್ಟು ತೆಲಂಗಾಣದಲ್ಲಿ ರಾಜಕೀಯ ಮಾಡುವುದಕ್ಕೆ ಹೋಗ್ತಾರೆ. ಇದು ಜನ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.