ಅಭಿಪ್ರಾಯ ಭೇದಗಳನ್ನು ಭಿನ್ನಮತ ಅನ್ನೋದು ಸರಿಯಲ್ಲ: ಡಾ.ಜಿ.ಪರಮೇಶ್ವರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಕೀಯದಲ್ಲಿ ಸಣ್ಣಪುಟ್ಟ ಅಭಿಪ್ರಾಯ ಭೇದಗಳು ಸಹಜ. ಅದನ್ನೇ ಭಿನ್ನಮತ ಎನ್ನುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಾ.ಜಿ.ಪರಮೇಶ್ವರ್‌ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ವಿಷಯಕ್ಕೆ ಉತ್ತರ ನೀಡಿದ ಗೃಹ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬೇಕೆಂದರೆ ಈಗಲೇ ನಾನು ಅವರ ಮನೆಗೆ ಹೋಗುತ್ತೇನೆ. ನಮ್ಮಿಬ್ಬರಲ್ಲಿ ಅಂಥ ಆತ್ಮೀಯತೆ ಇದೆ ಎಂದರು.

ಕಾಂಗ್ರೆಸ್ ಅಧಿಕಾರದಲ್ಲಿದೆ ಮತ್ತು ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಿದೆ. ಸಣ್ಣ ಭಿನ್ನಾಭಿಪ್ರಾಯಗಳೆಲ್ಲ ಸಹಜ. ಆದರೆ, ಅವು ಆಂತರಿಕ ಸಂಘರ್ಷಗಳಿಗೆ ಕಾರಣವಾಗುವುದಿಲ್ಲ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!