ತ್ರಿವರ್ಣ ಧ್ವಜ ಬಿಟ್ಟು ಭಾಗವಧ್ವಜ ಹಾರಿಸಿದ್ದು ಸರಿಯಲ್ಲ: ಸಿಎಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಾಗವಧ್ವಜ ಹಾರಿಸಿದ್ದು ಸರಿಯಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ಕಿತ್ತುಹಾಕಿರುವುದಕ್ಕೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ, ನಮ್ಮ ದೇಶದ ಬಾವುಟ ಹಾರಿಸಬೇಕು ಎಂದರು.

ಶ್ಯಾಮನೂರು ಶಿವಶಂಕರಪ್ಪನವರು ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರೇ ಗೆಲ್ಲಲಿ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನನಗೆ ಗೊತ್ತಿಲ್ಲ, ಅವರೊಂದಿಗೆ ಮಾತನಾಡುತ್ತೇನೆ ಎಂದರು.

ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!