ಮೆಟ್ರೋ ಟಿಕೆಟ್ ದರ ಏರಿಕೆ ಮಾಡೋದು ರಾಜ್ಯ ಸರ್ಕಾರ ಅಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೆಟ್ರೋ ಟಿಕೆಟ್ ದರ ಏರಿಕೆ ಮಾಡೋದು ರಾಜ್ಯ ಸರ್ಕಾರ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೆಟ್ರೋ ಟಿಕೆಟ್ ದರ ಏರಿಕೆ ಗೊಂದಲದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ನಿಗದಿ ಮಾಡುವ ಕಮಿಟಿಯನ್ನ ನೇಮಕ ಮಾಡೋದು ಕೇಂದ್ರ ಸರ್ಕಾರ. ಆ ಕಮಿಟಿಯಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿ, ಒಬ್ಬರು ರಾಜ್ಯ ಸರ್ಕಾರದವರು ಇರುತ್ತಾರೆ. ಮೆಟ್ರೋ ಸ್ವಾಯತ್ತ ಸಂಸ್ಥೆ ಆದರೂ ಮೆಟ್ರೋವನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಸೇರಿ ನಡೆಸುತ್ತವೆ ಎಂದರು.

ಬೆಲೆ ನಿಗದಿ ಮಾಡಿ, ಏರಿಕೆ ಮಾಡಿ ಅಂತ ನಾವು ಪ್ರಪೋಸಲ್ ಕೊಡುತ್ತೇವೆ. ಆದರೆ ಬೆಲೆ ನಿಗದಿ ಮಾಡೋದು ಕಮಿಟಿ ಅವರು. ಆ ಕಮಿಟಿಯ ಅಧ್ಯಕ್ಷರನ್ನು ಆಯ್ಕೆ ಮಾಡೋದು ಕೇಂದ್ರ ಸರ್ಕಾರದವರು ಅನ್ನೋ ಮೂಲಕ ಕೇಂದ್ರ ಸರ್ಕಾರವೇ ಮೆಟ್ರೋ ದರ ಏರಿಕೆ ಮಾಡಿರೋದು ಎಂದು ಪರೋಕ್ಷವಾಗಿ ಆರೋಪ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!