ಭದ್ರತಾಲೋಪದ ವಿಷಯದಲ್ಲೂ ರಾಜಕೀಯ ಮಾಡ್ತಿರೋದು ವಿಷಾದನೀಯ: ಸ್ಪೀಕರ್ ಓಂ ಬಿರ್ಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್‌ನಲ್ಲಿ ಭದ್ರತಾ ಲೋಪದ ಬಗ್ಗೆಯೂ ರಾಜಕೀಯ ಮಾಡುತ್ತಿರುವುದು ವಿಷಾದನೀಯ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಡಿ.13 ರಂದು ಸಂಸತ್‌ನಲ್ಲಿ ಭದ್ರತಾ ಉಲ್ಲಂಘನೆಯಾಗಿದೆ, ಇದು ಅತ್ಯಂತ ಗಂಭೀರ ಪ್ರಕರಣ ಇದರಲ್ಲಿಯೂ ರಾಜಕೀಯ ಮಾಡುತ್ತಿರುವುದು ಬೇಸರ ತಂದಿದೆ. ಅಮಿತ್ ಶಾ ಅವರು ಈ ಬಗ್ಗೆ ಮಾತನಾಡಬೇಕೆಂದು ವಿಪಕ್ಷಗಳು ಒತ್ತಾಯಿಸುತ್ತಿರುವುದು, ತಮ್ಮ ಲಾಭಕ್ಕೆ, ತಮ್ಮ ಬೇಡಿಕೆ ಈಡೇರಿಸುವಂಥ ಫಲಕ ಹಿಡಿದಿರುವುದು ಸದನದ ಘನತೆಯನ್ನು ಕಡಿಮೆ ಮಾಡುತ್ತದೆ ಎಂದಿದ್ದಾರೆ.

ಸದನದ ಘನತೆಯೊಂದಿಗೆ ಪ್ರಮುಖ ವಿಚಾರಗಳ ಚರ್ಚೆ ಮಾಡಬಹುದು, ಆದರೆ ಸದನದ ಬಾವಿಗೆ ನುಗ್ಗಿ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!