ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂತಹ ಘಟನೆ ನಡೆದಿರುವುದು ವಿಷಾದನೀಯ. ಘಟನೆಗೆ ಕಾರಣರಾದವರು ಮೊದಲು ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.
ಯಾವುದೇ ಕ್ಷೇತ್ರಕ್ಕೆ ಸಿಎಂ ಬರುವುದು ಅಭಿವೃದ್ಧಿ ಮಾಡುವುದಕ್ಕೆ ಹೊರತು ರಾಜಕೀಯ ಮಾಡುವುದಕ್ಕೆ ಅಲ್ಲ. ಇಂದಿನ ಕಾರ್ಯಕ್ರಮದ ಬಗ್ಗೆ ಒಂದು ವಾರದಿಂದಲೂ ಅಧಿಕಾರಿಗಳೊಂದಿಗೆ ಚರ್ಚೆ ಕೂಡ ಮಾಡಲಾಗಿದೆ. ಎಲ್ಲಾ ಜನಪ್ರತಿನಿಧಿಗಳಿಗೂ ಆಮಂತ್ರಣ ನೀಡಲಾಗಿದೆ.ಘಟನೆಗೆ ಕಾರಣ ಎಂಬುದನ್ನು ಜನರೇ ನೋಡಿದ್ದಾರೆ. ನನ್ನ ಸಮ್ಮುಖದಲ್ಲಿ ನಡೆದಿರುವುದು ವಿಷಾದನೀಯ ಎಂದರು.
ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ ಮತ್ತು ಸಂಸದ ಡಿ.ಕೆ.ಸುರೇಶ್ ನಡುವೆ ನಡೆದ ಜಟಾಪಟಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತು.