ಹೊಸದಿಗಂತ ವರದಿ ವಿಜಯಪುರ:
ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅವರು ಕುಟುಂಬ ಇಲ್ಲದ ನಾಯಕರು. ಆದರೆ ನಮ್ಮ ಪಕ್ಷದಲ್ಲಿ ಕುಟುಂಬ ರಾಜಕಾರಣ ಇರೋದು ಸತ್ಯ ಎಂದು ಸಚಿವ ಉಮೇಶ ಕತ್ತಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವೆಲ್ಲರೂ ಕುಟುಂಬ ರಾಜಕಾರಣದಿಂದ ಬಂದವರು. ನನ್ನ ತಂದೆ ರಾಜಕಾರಣದಲ್ಲಿ
ಇದ್ದರು, ಈಗ ನಾನು ಇದ್ದೇನೆ. ಬಿ.ಎಸ್. ಯಡಿಯೂರಪ್ಪನವರು ರಾಜಕಾರಣದಲ್ಲಿದ್ದರು. ಈಗ ಅವರ ಪುತ್ರ ವಿಜಯೇಂದ್ರ ಕೂಡ ರಾಜಕಾರಣದಲ್ಲಿದ್ದಾರೆ. ಬಿ.ಎಸ್. ಯಡಿಯೂರಪ್ಪನವರಿಗೆ ವಯಸ್ಸು 80 ಆಗಿದೆ. ಈಗಲೂ ದುಡಿಯುವ ತಾಕತ್ತು, ಹಂಬಲ ಇದೆ. ಆದರೂ ಪಕ್ಷದ ನಿಯಮಾನುಸಾರ ನಿವೃತ್ತಿ ಘೋಷಿಸಿದ್ದು, ಪುತ್ರನಿಗೆ ರಾಜಕೀಯ ಸ್ಥಾನಮಾನ ಕಲ್ಪಿಸಲು ತೀರ್ಮಾನಿಸಿದ್ದಾರೆ ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ