ರಾಜಕಾರಣಿಗಳು ಊಟಕ್ಕೆ ಸೇರುವುದೂ ತಪ್ಪೇ: ವಿರೋಧ ಪಕ್ಷಗಳ ಆರೋಪಕ್ಕೆ ಸಿದ್ದು ಟಾಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತುಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬರವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!