ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಇಟಿ ಪರೀಕ್ಷೆ ವೇಳೆ ಅಲ್ಲಿನ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂತ ಹೇಳಿದ್ದು ತಪ್ಪು, ಕೆಇಎ ಅಂತಹ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು.
ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂತ ಹೇಳಿದ್ದು ತಪ್ಪು, ಇದನ್ನ ಕೆಇಎ ಒಪ್ಪೋದಿಲ್ಲ. ಕೆಇಎ ಇಂತಹ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ. ತಪ್ಪು ಆಗಿರೋದಕ್ಕೆ ಕೆಇಎ ವಿಷಾದ ವ್ಯಕ್ತಪಡಿಸಿಸುತ್ತದೆ. ನಾನೇ ಅದಕ್ಕೆ ಕ್ಷಮೆ ಕೇಳ್ತೀನಿ. ಮುಂದೆ ಇಂತಹ ಘಟನೆ ಆಗದಂತೆ ಕಠಿಣ ಮಾರ್ಗಸೂಚಿ ಪ್ರಕಟ ಮಾಡ್ತೀವಿ ಎಂದು ಹೇಳಿದರು.
ಯಾವುದೇ ಜಾತಿ, ಧರ್ಮದ ವಿರುದ್ಧ ನಾವು ಮಾರ್ಗಸೂಚಿ ಸಿದ್ಧ ಮಾಡೋದಿಲ್ಲ, ಈಗ ತಪ್ಪು ಆಗಿದೆ. ಇಂತಹ ತಪ್ಪು ಮುಂದೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಷಯಗವನ್ನ ಮತ್ತಷ್ಟು ದೊಡ್ಡದು ಮಾಡೋದು ಬೇಡ. ಯಾರೂ ಇಂತಹ ಕೆಲಸ ಮಾಡಿದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.