ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಹಿಂಸಾಚಾರದಲ್ಲಿ ಇಂಫಾಲ್ನಲ್ಲಿ ನಿಯೋಜನೆಗೊಂಡ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.
ಭಾರತೀಯ ಕಂದಾಯ ಸಂಘ ಈ ಬಗ್ಗೆ ಮಾಹಿತಿ ನೀಡಿದ್ದು, ಇಂಫಾಲ್ನಲ್ಲಿ ತೆರಿಗೆ ಸಹಾಯಕರಾದ ಲೆಟ್ಮಿಂಗ್ಥಾಂಗ್ ಹಾಕಿಪ್ ಅವರು ಮೃತಪಟ್ಟಿದ್ದಾರೆ. ಈ ಭೀಕರ ಕೃತ್ಯವನ್ನು ಖಂಡಿಸುತ್ತೇವೆ, ಅಮಾಯಕ ಅಧಿಕಾರಿಯ ಹತ್ಯೆಯನ್ನ ಸಮರ್ಥಿಸುವುದಿಲ್ಲ ಎಂದು ಸಂಘ ಹೇಳಿದೆ.
ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಕರ್ಫ್ಯೂ ಮುಂದುವರಿದಿದ್ದು, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.