ಮಾಜಿ ಸಚಿವ ಕೆ.ಗಂಗಾಧರ ಗೌಡ ನಿವಾಸದ ಮೇಲೆ ಐಟಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾಜಿ ಸಚಿವರೂ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿರುವ ಕೆ.ಗಂಗಾಧರ ಗೌಡ ಅವರ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲದ ಪ್ರಸನ್ನ ಇನ್ಸ್ಟಿಟ್ಯೂಷನ್ , ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಇಂದು ಬೆಳಗ್ಗೆ ಇನೋವಾ ಕಾರಿನಲ್ಲಿ ಪೊಲೀಸರ ಜೊತೆ ಬಂದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ ಟಿಕೆಟ್‌ ರಕ್ಷಿತ್ ಶಿವರಾಂ ಅವರಿಗೆ ಲಭಿಸುತ್ತಲೆ ರಾಜಕೀಯ ಓಡಾಟದಿಂದ ಹಿಂದೆ ಸರಿದಿದ್ದರು. ಇದೀಗ ಐಟಿ ದಾಳಿ ಶಾಕ್ ನೀಡಿದೆ.

ಮನೆಯಲ್ಲಿರುವ ಸ್ವತ್ತು, ಕಾಲೇಜಿನ ದಾಖಲೆ ಸಹಿತ ಪೊಲೀಸ್ ತಂಡದ ಸಮ್ಮುಖದಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!