ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದೂಗಳ ಜನಸಂಖ್ಯೆ ಕಡಿಮೆ ಮಾಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಜಾತಿಗಣತಿ ಮಾಡುತ್ತಿರುವಂತಿದೆ ಎಂದು ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಈ ರಾಜ್ಯದಲ್ಲಿ ಪರಿಶಿಷ್ಟ ಪಂಗಡದವರು 1.40 ಕೋಟಿಗೂ ಹೆಚ್ಚಿದ್ದಾರೆ. ಅವರು ಕ್ರಿಶ್ಚಿಯನ್ನರು ಹಾಕುವ ಬಿರಿಯಾನಿಗೆ ಹೋಗುತ್ತಾರೆ. ಅದನ್ನು ತಿಂದವರೆಲ್ಲರೂ ಕ್ರಿಶ್ಚಿಯನ್ನರು. ಅದಕ್ಕಾಗಿ ಅವರನ್ನು ಹಿಂದೂ ಧರ್ಮದಿಂದ ತೆಗೆಯುತ್ತೇವೆ ಎಂದಿದ್ದಾರೆ ಎಂದು ಟೀಕಿಸಿದರು.