ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲೆಕ್ಷನ್ ಹೊತ್ತನಲ್ಲಿ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಶಾಕ್ ಎದುರಾಗಿದ್ದು,ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಡಿ ವಿಚಾರಣೆಗೆ ಒಳಗಾಗಿದ್ದಾರೆ. ಈ ಬೆನ್ನಲ್ಲೇ ಐಟಿ ಶಾಕ್ ಕೊಡಲಿದೆ.
ಡಿ.ಕೆ ಶಿವಕುಮಾರ್ ವಿರುದ್ಧ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೊರ್ಟ್ ನಿಂದ ತಡೆ ಹಿಡಿಯಲಾಗಿದೆ. ನ್ಯಾ. ಸಂಜೀವ್ ಖನ್ನ ನೇತೃತ್ವದ ದ್ವಿಸದಸ್ಯ ಪೀಠದಿಂದ ತಡೆ ಹಿಡಿಯಲಾಗಿದೆ .
2018 ರಲ್ಲಿ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ದಾಖಲೆ ವಶಕ್ಕೆ ಪಡೆಯಲಾಗಿದೆ. ಡಿ.ಕೆ ಶಿವಕುಮಾರ್ ಕೋಣೆಯಲ್ಲಿ ಇ ಡಿ ಅಧಿಕಾರಿಗಳು ದಾಖಲೆ ವಶಕ್ಕೆ ಪಡೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ತನಿಖೆಗೆ ಹೈಕೋರ್ಟ್ ತಡೆ ಹಿಡಿದಿದೆ. ಆದರೆ ಹೈ ಕೋರ್ಟ್ ಆದೇಶ ಪ್ರಶ್ನೆಯನ್ನು ಐಟಿ ಮಾಡಿತ್ತು. ಇದೀಗ 6 ವಾರಗಳ ಬಳಿಕ ಮತ್ತೆ ಸುಪ್ರೀಂಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಇದರಿಂದ ಎಲೆಕ್ಷನ್ ಹೊತ್ತನಲ್ಲಿ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಶಾಕ್ ಎದುರಾಗಿದೆ.