ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೆಡೆ ಗುಜರಾತ್ ನಲ್ಲಿ ನೆಲೆ ಕಾಣಲು ಆಪ್ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಠಿಕಾಣಿ ಹೂಡಿದ್ದರೆ , ಇತ್ತ ಆಪ್ ಮುಖಂಡರು ದಿನಕ್ಕೊಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕುತ್ತಿದ್ದಾರೆ.
ಗುಜರಾತ್ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಗೋಪಾಲ್ ಇಟಾಟಲಿಯಾ ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಈಗಾಗಲೇ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದು, ಆದರೂ ಮತ್ತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಇದೀಗ ಪ್ರಧಾನಿ ಮೋದಿ ತಾಯಿ ಹಿರಾ ಬೆನ್ ವಿರುದ್ಧ ಹೇಳಿಕೆ ನೀಡಿದ ಗೋಪಾಲ್ ಇಟಾಟಲಿಯಾ, ಹಿರಾ ಬೆನ್ ಮಾಡಿದ ಒಂದು ಅಪರಾಧ ಎಂದರೆ ನರೇಂದ್ರ ಮೋದಿಗೆ ಜನ್ಮ ನೀಡಿರುವುದು. ಅರವಿಂದ್ ಕೇಜ್ರಿವಾಲ್ ರಾಜಕೀಯ ದೂರದೃಷ್ಠಿ ಹಾಗೂ ಯೋಜನೆಗಳನ್ನು ವಿಫಲಗೊಳಿಸುವ ನಾಯಕನಿಗೆ ಜನ್ಮ ನೀಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೋಪಾಲ್ ಇಟಾಲಿಯಾ ಹೇಳಿಕೆ ಇದೀಗ ಆಮ್ ಆದ್ಮಿ ಪಾರ್ಟಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇಟಾಲಿಯಾ ವಿರುದ್ಧ ಬಿಜೆಪಿ ನಾಯಕರು ಗರಂ ಆಗಿದ್ದಾರೆ.