ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ‘ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್’ಗೆ ನಿನ್ನೆ ಬಾಂಬ್ ಇಡೋದಾಗಿ ಬೆದರಿಕೆ ಮೆಲ್ ಬಂದಿದ್ದು, ಎಲ್ಲರನ್ನು ಆತಂಕಕ್ಕೆ ದೂಡಿತ್ತು.
‘ಹುಚ್ಚ ಸ್ವಾಮಿ ವೆಂಕಟ್’ ಹೆಸರಿನ ಮೇಲ್ ಮೂಲಕ ಈ ಹುಸಿ ಬೆದರಿಕೆ ಕಂಡು , ಎಲ್ಲರು ಹುಚ್ಚ ವೆಂಕಟ್ ಅವರು ಬೆದರಿಕೆ ಹಾಕಿದ್ದು, ಎಂದು ನಂಬಿದ್ದರು. ಆದರೆ ಇದೀಗ ಸೋಮವಾರ ಇಡೀ ದಿನ ಆತಂಕ ಹುಟ್ಟಿಸಿದ್ದು ಯಾರೆಂದು ಬಯಲಾಗಿದೆ.
ಹೌದು , ಡಿ.ಕೆ.ಶಿವಕುಮಾರ್ ಒಡೆತನದ ಸ್ಕೂಲ್ಗೆ ಬಾಂಬ್ ಇಡುವುದಾಗಿ ಬೆದರಿಕೆ ಮೇಲ್ ಕಳುಹಿಸಿದ್ದು, ಬೇರೆಯರು ಅಲ್ಲ.. ಓರ್ವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ.
ಜು.21ರಂದು 10ನೇ ತರಗತಿಗೆ ಮೊದಲ ಸೆಮಿಸ್ಟರ್ ಪರೀಕ್ಷೆ ಇತ್ತು. ಈ ಪರೀಕ್ಷೆ ಮುಂದೂಡಿಸಲೆಂದು ಆತ ಈ ಪ್ಲ್ಯಾನ್ ಮಾಡಿದ್ದನು ಎಂದು ಗೊತ್ತಾಗಿದೆ. [email protected] ಅನ್ನೋ ಮೇಲ್ ಐಡಿಯಿಂದ, ಭಾನುವಾರ ಸಂಜೆ 6.30ಕ್ಕೆ ಸ್ಕೂಲ್ನ 3ನೇ ಯೂನಿಟ್ಗೆ ಬೆದರಿಕೆ ಮೇಲ್ ಕಳುಹಿಸಿದ್ದ.
‘ಕ್ಯಾಂಪಸ್ ಹಾಗೂ ಶಾಲೆಯಲ್ಲಿ ಬಾಂಬ್ ಇಡಲಾಗಿದೆ. ನಾಳೆ(ಸೋಮವಾರ) ಬೆಳಗ್ಗೆ 10 ಗಂಟೆಗೆ ಬ್ಲಾಸ್ಟ್ ಆಗುವ ಹಾಗೇ ಫಿಕ್ಸ್ ಮಾಡಲಾಗಿದೆ. ಶಾಲೆ ಆವರಣದ 200 ಮೀಟರ್ ಅದರ ಎಫೆಕ್ಟ್ ಆಗುತ್ತೆ. ಥ್ಯಾಂಕ್ಸ್, ಬಾಂಬ್ ಟೆರರಿಸ್ಟ್’ ಎಂದು ಮೇಲ್ ಕಳುಹಿಸಿದ್ದನು.
ಸೋಮವಾರ ಬೆಳಗ್ಗೆ ಸಿಬ್ಬಂದಿ ಶಾಲೆಗೆ ಬಂದಾಗ ಮೇಲ್ ನೋಡಿ ಸಿಬ್ಬಂದಿ ಗಾಬರಿಯಾಗಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಆರ್ಆರ್ ನಗರ ಠಾಣೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಕಂಡು ಬಂದಿಲ್ಲ.
ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಆರ್ಆರ್ ನಗರ ಪೊಲೀಸರು, ವಿದ್ಯಾರ್ಥಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗಿ ಸತ್ಯಾಂಶ ಬಯಲಾಗಿದೆ. ಇದೀಗ ವಿದ್ಯಾರ್ಥಿಯನ್ನ ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.