ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಪ್ರತಿಭಟನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಬೆಂಗಳೂರನ್ನು ಹಾಳು ಮಾಡಿದ್ದೇ ಕಾಂಗ್ರೆಸ್ನವರು ಎಂದು ಹೇಳಿದ್ದಾರೆ.
10-15 ಜನ ಸೇರಿ 300 ಕಡೆ ಪ್ರತಿಭಟನೆ ಮಾಡ್ತಾರೆ, ಬೆಂಗಳೂರಿನಲ್ಲಿ ಈಗ ತಲೆಎತ್ತಿರುವ ಸಾಕಷ್ಟು ಸಮಸ್ಯೆಗೆ ಕಾಂಗ್ರೆಸ್ನವರೇ ಕಾರಣ. ಅವರ ಕಾಲದಲ್ಲಿ ಆದ ದೊಡ್ಡ ಹಗರಣಗಳ ಬಗ್ಗೆ ಗಮನ ಹೋಗಬಾರದು ಎಂದು ಈ ರೀತಿ ಪ್ರತಿಭಟನೆ ಮಾಡ್ತಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಎಷ್ಟು ಹೇಳಿದರೂ ಸಾಲೋದಿಲ್ಲ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್. ಅವರ ಅಧಿಕಾರದ ಸಮಯದಲ್ಲಿ ಬೆಂಗಳೂರನ್ನು ಲೂಟಿ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.