ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಯಾವುದು, ಸಂಜೆ ಯಾವುದು ಅನ್ನೋ ವ್ಯತ್ಯಾಸನೇ ತಿಳಿಯದಂಥ ವಾತಾವರಣ ನಿರ್ಮಾಣವಾಗಿದೆ.
ಗಂಟೆ ಎಂಟಾದರೂ ಹಾಸಿಗೆಯಿಂದ ಎದ್ದೇಳೋದಕ್ಕೆ ಎಷ್ಟೋ ಜನರಿಗೆ ಕಷ್ಟವಾಗಿದೆ. ಇಂಥ ಚಳಿ ಹಾಗೂ ಮೂಡಿ ವೆದರ್ನಲ್ಲಿ ಕಷ್ಟಪಟ್ಟು ಆಫೀಸ್, ಕೆಲಸ ಅಥವಾ ಸ್ಕೂಲಿಗೆ ತಯಾರಾಗಿ ಹೊರಟವರಿಗೆ ಮನೆ ಬಾಗಿಲಿನ ಬಳಿ ಬಂದ ಕೂಡಲೇ ತುಂತುರು ಮಳೆ ಸಿಂಚನವಾಗಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಶಿವಮೊಗ್ಗ, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.