ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮಗೆ ಬಲ ಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಹೊಟ್ಟೆಯುರಿ ಏಕೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
ಹಾಸನದ ಸ್ವಾಭಿಮಾನಿ ಸಮಾವೇಶಕ್ಕೆ ತೆರಳುವ ಮುನ್ನ ಮಾತನಾಡಿದ ಅವವರು, ನಮ್ಮ ಪಕ್ಷ ಹಾಗೂ ಅನೇಕ ಸ್ವಾಭಿಮಾನಿ ಸಂಘಟನೆಗಳು ಸೇರಿ ಮಾಡುತ್ತಿರುವ ಕಾರ್ಯಕ್ರಮ. ಮುಂದೆ ಬೇರೆ ಜಿಲ್ಲೆಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಾವು ಸಹಕಾರ ನೀಡುತ್ತೇವೆ ಎಂದು ಅನೇಕ ಸಂಘಟನೆಗಳು ಮುಂದೆ ಬಂದಿವೆ. ಹಾಸನದಲ್ಲಿ ನಮ್ಮ ತಾಯಂದಿರು ಕಣ್ಣೀರು ಹಾಕಿದಾಗ ಅವರ ಕಣ್ಣೀರನ್ನು ಯಾರೂ ಒರೆಸುವ ಪ್ರಯತ್ನ ಮಾಡಲಿಲ್ಲ. ಚನ್ನಪಟ್ಟಣಕ್ಕೆ ಬಂದು ಕಣ್ಣೀರು ಹಾಕಿದರು. ಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ ಎಂದು ತಿಳಿಸಿದರು.
ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪರಮೇಶ್ವರ ಅವರ ಅಸಮಾಧಾನದ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ನಿಮ್ಮ ಮುಂದೆ ಏನೂ ಮಾತನಾಡಿಲ್ಲ. ಪರಮೇಶ್ವರ ಹಾಗೂ ಇತರರ ಜತೆ ಮಾತನಾಡಿಲ್ಲ. ನಾನು ವಾಹಿನಿಯಂದರಲ್ಲಿ ನನ್ನದೇ ಆದ ವಿಚಾರ ಪ್ರಸ್ತಾಪ ಮಾಡಿದ್ದೆ. ನಾವು ಏನು ಮಾತನಾಡಿಕೊಂಡಿದ್ದೇವೆ ಎಂದು ನಿಮ್ಮ ಮುಂದೆ ಹೇಳಲು ಸಾಧ್ಯವೇ? ಈ ವಿಚಾರವಾಗಿ ಮುಖ್ಯಮಂತ್ರಿಗಳು ನಿನ್ನೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದ್ದು, ನಾನು ಚರ್ಚೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದೇನೆ. ಮುಖ್ಯಮಂತ್ರಿಗಳ ಮಾತನ್ನು ನಾನು ಒಪ್ಪುತ್ತೇನೆ. ಸದ್ಯಕ್ಕೆ ಅಧಿಕಾರ ಹಸ್ತಾಂತರದ ಪ್ರಸ್ತಾಪವಿಲ್ಲ ಎಂದಿದ್ದಾರೆ.