ಸಿದ್ದರಾಮಯ್ಯ ಮನೆಗೆ ಹೋಗೋ ಟೈಮ್‌ ಹತ್ರ ಬರ್ತಾ ಇದೆ: ಬಿಎಸ್‌ವೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಎಸ್‌ವೈ ರಾಜಕೀಯದಿಂದ ನಿವೃತ್ತಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಬಿ.ಎಸ್‌. ಯಡಿಯೂರಪ್ಪ ಗರಂ ಆಗಿದ್ದಾರೆ.

ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ. ಅವರು ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಸಿದ್ದರಾಮಯ್ಯ ಈಗ ಮನಬಂದಂತೆ ಮಾತಾಡುತ್ತಿದ್ದಾರೆ, ಮಾತಾಡಲಿ ಎಂದಿದ್ದಾರೆ.

ಮುಡಾದಲ್ಲಿ ಅಕ್ರಮ ಖಂಡಿಸಿ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗಮಿಸಿದ್ದು ಚಾಮುಂಡೇಶ್ವರಿ ದರುಶನ ಪಡೆದಿದ್ದಾರೆ. ನಾಳೆ ಮೂರು ಲಕ್ಷಕ್ಕೂ ಅಧಿಕ ಜನ ನಮ್ಮ ಬೃಹತ್ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಪಾದಯಾತ್ರೆಗೆ ಜನರಿಂದ‌ ಉತ್ತಮ ಪ್ರತಿಕ್ರಿಯೆ ಸಿಕ್ತಾ ಇದೆ. ಭ್ರಷ್ಟ ಸರ್ಕಾರ‌ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ. ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಪೊಕ್ಸೋ ಕೇಸ್‌ನಲ್ಲಿ ನಾಳೆ ಕೋರ್ಟ್‌ನಲ್ಲಿ ತೀರ್ಮಾನ ಆದಾಗ ಎಲ್ಲಾ ಬಹಿರಂಗವಾಗುತ್ತೆ. ಅಲ್ಲಿಯವರೆಗೆ ನಾನು ಏನು ಮಾತಾಡಲ್ಲ. ಅದಾದ ಬಳಿಕ ಸಿದ್ದರಾಮಯ್ಯಗೆ ಉತ್ತರ ಸಿಗುತ್ತೆ. ಅವರು ಈಗ ಮನಬಂದಂತೆ ಮಾತಾಡುತ್ತಿದ್ದಾರೆ ಮಾತಾಡಲಿ. ಹತಾಶೆಯ ಮನೋಭಾವದಲ್ಲಿ ಇರೋದನ್ನು ಜನರೇ ತೀರ್ಮಾನ ಮಾಡ್ತಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!