ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಚಳಿಯ ವಾತಾವರಣ ಆರಂಭವಾಗಿದ್ದು, ಇಂದು ಬೆಳಗಿನ ಜಾವ ಗಂಟೆ ಏಳಾದರೂ ಸ್ವಲ್ಪವೂ ಬಿಸಿಲು ಕಾಣಿಸಿಲ್ಲ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗಿದ್ದು, ಮೂಲೆಯಲ್ಲಿಟ್ಟಿದ್ದ ಸ್ವೆಟರ್ಗಳನ್ನೆಲ್ಲ ಹೊರಗೆ ತೆಗೆಯುವ ಸಮಯ ಬಂದಾಗಿದೆ.
ಡಿಸೆಂಬರ್ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ವಾಡಿಕೆಗಿಂತ 2 ರಿಂದ 3 ಡಿಗ್ರಿಯಷ್ಟು ನಷ್ಟು ಉಷ್ಣಾಂಶ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ನ.22) ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟಿಗ್ರೆಡ್ಗಿಂತ ಕಳೆಗೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್ವರಗೂ ಇಳಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ಹೇಳಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಶುಕ್ರವಾರ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ, ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು, ಮಂಗಳೂರಿನಲ್ಲಿ ಗರಿಷ್ಠ 33, ಕನಿಷ್ಠ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ನಷ್ಟು ತಪಾಮಾನ ವರದಿಯಾಗಲಿದೆ.