ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇ 9 ಮತ್ತು ಮೇ 10 ರ ಮಧ್ಯರಾತ್ರಿ ಭಾರತವು ಬ್ರಹ್ಮೋಸ್ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಪಾಕಿಸ್ತಾನದ ಯೋಜಿತ ದಾಳಿಯನ್ನು ವಿಫಲಗೊಳಿಸಿತು ಎಂದು ದೇಶದ ಪ್ರಧಾನಿ ಶೆಹಬಾಜ್ ಷರೀಫ್ ಸಾರ್ವಜನಿಕ ಭಾಷಣದಲ್ಲಿ ಒಪ್ಪಿಕೊಂಡಿದ್ದಾರೆ.
ಅಜೆರ್ಬೈಜಾನ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಷರೀಫ್, ಪಾಕಿಸ್ತಾನಿ ಸಶಸ್ತ್ರ ಪಡೆಗಳು ಬೆಳಗಿನ ಪ್ರಾರ್ಥನೆಗೆ ಮುನ್ನ ಭಾರತದ ಮೇಲೆ ದಾಳಿ ಮಾಡಲು ಯೋಜಿಸಿದ್ದವು, ಆದರೆ ಅದು ಸಾಧ್ಯವಾಗುವ ಮೊದಲೇ ಪಾಕಿಸ್ತಾನದ ಹಲವಾರು ಪ್ರಾಂತ್ಯಗಳ ಮೇಲೆ ಬ್ರಹ್ಮೋಸ್ ಕ್ಷಿಪಣಿಗಳ ದಾಳಿ ನಡೆಯಿತು ಎಂದು ಹೇಳಿದ್ದಾರೆ.
“ಮೇ 9-10ರ ರಾತ್ರಿ, ನಾವು ಭಾರತದ ಆಕ್ರಮಣಕ್ಕೆ ಕ್ರಮಬದ್ಧವಾಗಿ ಪ್ರತಿಕ್ರಿಯಿಸಲು ನಿರ್ಧರಿಸಿದ್ದೆವು. ಫಜ್ರ್ ಪ್ರಾರ್ಥನೆಯ ನಂತರ ಬೆಳಿಗ್ಗೆ 4.30 ಕ್ಕೆ ನಮ್ಮ ಸಶಸ್ತ್ರ ಪಡೆಗಳು ಪಾಠ ಕಲಿಸಲು ಸಿದ್ಧವಾಗಿದ್ದವು. ಆದರೆ ಆ ಗಂಟೆ ಬರುವ ಮೊದಲೇ, ಭಾರತ ಮತ್ತೊಮ್ಮೆ ರಾವಲ್ಪಿಂಡಿಯ ವಿಮಾನ ನಿಲ್ದಾಣ ಸೇರಿದಂತೆ ಪಾಕಿಸ್ತಾನದ ವಿವಿಧ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡು ಬ್ರಹ್ಮೋಸ್ ಬಳಸಿ ಕ್ಷಿಪಣಿ ದಾಳಿ ನಡೆಸಿತು” ಎಂದು ಷರೀಫ್ ತಮ್ಮ ಭಾಷಣದಲ್ಲಿ ಸತ್ಯ ಒಪ್ಪಿಕೊಂಡಿದ್ದಾರೆ.