ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ 22 ರಂದು ಭಗವಾನ್ ರಾಮ ನಮಗೆಲ್ಲರಿಗೂ ದರ್ಶನವನ್ನು ನೀಡಲಿದ್ದಾನೆ. ಅಯೋಧ್ಯೆಯ ರಾಮ ಮಂದಿರದ (Ayodhya RamMandir) ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ (Pran Prathistha Ceremony) ನನ್ನನ್ನು ಆಹ್ವಾನಿಸಿರುವುದು ನನ್ನ ಅದೃಷ್ಟ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (PM-JANMAN) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಫಲಾನುಭವಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಇನ್ನೇನು ಕೆಲವು ದಿನಗಳ ನಂತರ ಅಂದರೆ ಜನವರಿ 22 ರಂದು ಭಗವಾನ್ ರಾಮನು ತನ್ನ ಭವ್ಯವಾದ ದೇವಾಲಯದಲ್ಲಿ ನಮಗೆ ದರ್ಶನವನ್ನು ನೀಡುತ್ತಾನೆ. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ ನಾನು 11 ದಿನಗಳ ವಿಶೇಷ ಅನುಷ್ಠಾನವನ್ನು ಪ್ರಾರಂಭಿಸಿದ್ದೇನೆ. ಮಾತಾ ಶಬರಿ ಇಲ್ಲದೆ ಭಗವಾನ್ ರಾಮನ ಕಥೆ ಅಪೂರ್ಣ ಎಂದು ತಿಳಿಸಿದರು.
ಕಳೆದ ವಾರ ಮೋದಿಯವರು ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಉಳಿದಿರುವಾಗ 11 ದಿನಗಳ ವಿಶೇಷ ಆಚರಣೆಯೊಂದನ್ನು ಪ್ರಾರಂಭಿಸುವುದಾಗಿ ಹೇಳಿದ್ದರು . ರಾಮ ಮಂದಿರದ ‘ ಪ್ರಾಣ ಪ್ರತಿಷ್ಠಾ’ಕ್ಕೆ ಕೇವಲ 11 ದಿನಗಳು ಮಾತ್ರ ಉಳಿದಿವೆ . ಪವಿತ್ರೀಕರಣದ ಸಮಯದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ದೇವರು ನನ್ನನ್ನು ಸೃಷ್ಟಿಸಿದ್ದಾನೆ. ಇದನ್ನು ಗಮನದಲ್ಲಿಟ್ಟುಕೊಂಡು ನಾನು ಇಂದಿನಿಂದ 11 ದಿನಗಳ ಕಾಲ ವಿಶೇಷ ಆಚರಣೆಯನ್ನು ಪ್ರಾರಂಭಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದರು.