ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ರಾಜ್ಯಸಭೆಯ ಸದನ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಇದುವರೆಗೆ ಪಿಯೂಷ್ ಗೋಯಲ್ ಅವರು ಮೇಲ್ಮನೆಯಲ್ಲಿ ಸದನ ನಾಯಕರಾಗದ್ದರು. ಈಗ ಅವರ ಬದಲಿಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಆಯ್ಕೆ ಮಾಡಲಾಗಿದೆ.
ಪಿಯೂಷ್ ಗೋಯಲ್ ಅವರು ಲೋಕಸಭೆ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಆಯ್ಕೆಯಾದ ಕಾರಣ ಜೆ.ಪಿ.ನಡ್ಡಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪಿಯೂಷ್ ಗೋಯಲ್ ಅವರು 2010ರ ಜುಲೈ 5ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅವರನ್ನು ರಾಜ್ಯಸಭೆ ಸದನ ನಾಯಕರನ್ನಾಗಿ 2021ರ ಜುಲೈ 14ರಂದು ಆಯ್ಕೆ ಮಾಡಲಾಗಿತ್ತು.
ಸದ್ಯ, ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ.