Friday, March 24, 2023

Latest Posts

ಸಂತ ಸಮಾವೇಶದಲ್ಲಿ ಪಾಲ್ಗೊಂಡ ಜೆ.ಪಿ ನಡ್ಡಾ: ಉಗ್ರವಾದಿ ಚಟುವಟಿಕೆಗಳನ್ನು ಮಟ್ಟ ಹಾಕಲು ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಾಶಿಯ ಕಾರಿಡಾರ್ ಯೋಜನೆ ಮಾದರಿಯಲ್ಲಿ ಉಡುಪಿ ಕಾರಿಡಾರ್ ಯೋಜನೆಯನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಳ್ಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಆಗ್ರಹಿಸಿದ್ದಾರೆ.

ಉಡುಪಿ ಪೇಜಾವರ ಮಠದಲ್ಲಿ ಇಂದು ನಡೆದ ಸಂತ ಸಮಾವೇಶದಲ್ಲಿ ಪಾಲ್ಗೊಂಡ ಪುತ್ತಿಗೆ ಶ್ರೀಗಳು ವಿದೇಶದಲ್ಲಿರುವ ಹಿಂದುಗಳ ಹಾಗೂ ಅಲ್ಲಿನ ದೇವಾಲಯಗಳ ರಕ್ಷಣೆಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದರು.

ಸಮಾನ ನಾಗರಿಕ ಸಂಹಿತೆ ಹಾಗೂ ಗೋ ಹತ್ಯಾ ನಿಷೇಧ ಪರಿಣಾಮಕಾರಿಗಳ ಜಾರಿ ಕುರಿತು ನಡ್ದ ಅವರ ಗಮನ ಸೆಳೆದ ಸಂತರು ಲವ್ ಜಿಹಾದ್ ಕೌ ಜಿಹಾದ್ ಮುಂತಾದ ಉಗ್ರವಾದಿ ಚಟುವಟಿಕೆಗಳನ್ನು ಮಟ್ಟ ಹಾಕಲು ಆಗ್ರಹಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!