ಹೊಸದಿಗಂತ ಡಿಜಿಟಲ್ ಡೆಸ್ಕ್ :
ಈ ಭಾರಿಯ ಹುಬ್ಬಳ್ಳಿ– ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈತಪ್ಪುವುದು ಖಚಿತವಾಗುತ್ತಿದ್ದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜಗದೀಶ ಶೆಟ್ಟರ್ ಶನಿವಾರ ಘೋಷಣೆ ಮಾಡಿದ್ದಾರೆ.
ಭಾನುವಾರ ಬೆಳಿಗ್ಗೆ ಶಿರಸಿಯಲ್ಲಿ ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಬಿದ್ದಿದೆ.
ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಇಂದು (ಏಪ್ರಿಲ್ 15) ರಾತ್ರಿ ಜಗದೀಶ್ ಶೆಟ್ಟರ್ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ ಸಂಧಾನ ಸಭೆ ವಿಫಲವಾಗಿದ್ದು, ಇದೀಗ ಜಗದೀಶ್ ಶೆಟ್ಟರ್ ಅಂತಿಮವಾಗಿ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು.
ರಾಜೀನಾಮೆ ನೀಡಿದ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.