ದಿಗಂತ ವರದಿ ಹುಬ್ಬಳ್ಳಿ:
ಅವಳಿನಗರದ ವಿವಿಧ ಅಭಿವೃದ್ಧಿ ಯೋಜನೆ ಕುರಿತು ಕೇಂದ್ರ ಸಚಿವರ ಜೊತೆ ಚರ್ಚಿಸಲು ದೆಹಲಿ ಪ್ರವಾಸ ಕೈಗೊಂಡಿದ್ದು, ಇದಕ್ಕೆ ಯಾವುದೇ ರಾಜಕೀಯ ಬಣ ಬೇಡ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿದ ಅವರು, ನಗರದಲ್ಲಿರುವ ರಿಂಗ್ ರೋಡ್ ಉದ್ಘಾಟನೆ ಮಾಡುವುದರ ಕುರಿತು ಕೇಂದ್ರ ಸಚಿವರ ಮುಂದೆ ಪ್ರಸ್ತಾಪ ಸಲ್ಲಿಸಲಾಗಿದೆ. ಈ ಭಾಗದಲ್ಲಿ ಕೈಗಾರಿಕ ಕಂಪನಿ ಸ್ಥಾಪಿಸಲು ಉದ್ಯಮಿಗಳು ಮುಂದೆ ಬಂದಿದ್ದು,ಅವರಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಮಾತನಾಡಲು ಹೋರಟ್ಟಿದ್ದೇನೆ ಎಂದರು.