ವಿಧಾನಸೌಧದಲ್ಲಿ ಜಗಜೀವನ್ ರಾಂ 115ನೇ ಜನ್ಮದಿನಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಜಗಜೀವನ್ ರಾಂ ಅವರದ್ದು ಅಪರೂಪದ ನಾಯಕತ್ವ ಹಾಗೂ ವ್ಯಕ್ತಿತ್ವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಾಬು ಜಗಜೀವನ್ ರಾಂ ಅವರ 115ನೇ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು.

ಬಿಹಾರದ ಕಡುಬಡತನದ ಮನೆತನದಲ್ಲಿ ಹುಟ್ಟಿ, ಬಹಳಷ್ಟು ಅವಮಾನ, ಅಪಮಾನಗಳನ್ನು ಸಹಿಸಿಕೊಂಡು ಬೆಳೆದ ಅವರು ಮುಂದೆ ಭಾರತನ ಉಪಪ್ರಧಾನಿಯಾಗಿ ಬೆಳೆದರು. ನೋವುಂಡರೂ ಅಧಿಕಾರ ಬಂದಾಗ ಸಮಸ್ತ ಭಾರತದ ಕಲ್ಪನೆಯಲ್ಲಿ ಕೆಲಸ ಮಾಡಿದರು. ಅವರಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಸ್ವತಂತ್ರ ಪೂರ್ವದ ನಾಯಕ ಎಂದು ಹೇಳಿದರು.

ದೀನದಲಿತರ ಅಭಿಮಾನದ, ಸ್ವಾಭಿಮಾನದ ಸಂಕೇತ
ದೀನದಲಿತರ ಧ್ವನಿಯಾಗಿ ಅವರಿಗೆ ನ್ಯಾಯ ಒದಗಿಸಲು ಅವರು ಪಟ್ಟ ಪರಿಶ್ರಮ ದೊಡ್ಡದು. ದೀನದಲಿತರ ಅಭಿಮಾನದ, ಸ್ವಾಭಿಮಾನದ ಸಂಕೇತವಾಗಿದ್ದರು. ಕೃಷಿ ಸಚಿವರಾಗಿ ಅವರು ಮಾಡಿದ ಹಸಿರು ಕ್ರಾಂತಿ ಭಾರತ ದೇಶವನ್ನು ಸ್ವಾಭಿಮಾನಿ ರಾಷ್ಟ್ರವನ್ನಾಗಿ ಬೆಳೆಸಿದೆ. ಒಂದು ಕಾಲದಲ್ಲಿ ವಿದೇಶದಿಂದ ಆಹಾರ ಧ್ಯಾನಗಳನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ವಿಜ್ಞಾನದಿಂದ ಹಸಿರು ಕ್ರಾಂತಿಯಾಗಿ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯಾದ ಮೇಲೆ ನಮ್ಮದು ಸ್ವಾವಲಂಬಿ ದೇಶವಾಗಿದೆ. ಅದಕ್ಕೆ ಜಗಜೀವನ್ ರಾಮ್ ಅವರೇ ಕಾರಣೀಭೂತರು. ರಕ್ಷಣಾ ಮಂತ್ರಿಯಾಗಿ ರಾಷ್ಟ್ರದ ಸುರಕ್ಷತೆಗಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿಯೂ ಪ್ರಸಿದ್ದಿ ಪಡೆದಿದ್ದರು. ಅವರ ವಿಚಾರಗಳು ನಮಗೆ ಪ್ರೇರಣೆ. ಅವರ ತತ್ವ ಆದರ್ಶಗಳನ್ನು ಇಟ್ಟುಕೊಂಡು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡುವ ಮೂಲಕ ಜಗಜೀವನ್ ರಾಂ ಅವರಿಗೆ ನಿಜವಾದ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತೇವೆ. ದಲಿತರ ಪ್ರೇರಣಾ ದಿನ ಎಂದು ಭಾವಿಸಿ ನಾವು ಕೆಲಸ ಮಾಡಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!