ಆಂಧ್ರ ವಿಧಾನಸಭೆ ಚುನಾವಣೆಗೂ ಮುನ್ನ ಜಗನ್ ಶಾಕ್: ಕೈ ಕೊಟ್ಟ ಇಬ್ಬರು ಶಾಸಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ವೈಎಸ್‌ಆರ್‌ಸಿಪಿ ಭಾರಿ ಹಿನ್ನಡೆಯಾಗಿದೆ. ವೈಎಸ್‌ಆರ್‌ಸಿಪಿಯ ಇಬ್ಬರು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಶಾಸಕರಾದ ವುನ್ನಮಟ್ಲಾ ಎಲಿಜಾ ಮತ್ತು ವಿ ವರಪ್ರಸಾದ್ ರಾವ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಇತ್ತ ಚಿಂತಲಪುಡಿ ವಿಧಾನಸಭಾ ಕ್ಷೇತ್ರದ ಶಾಸಕಿ ವುನ್ನಮಟಾಲ ಎಲಿಜಾ ಅವರು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.ಇದಲ್ಲದೇ ವರಪ್ರಸಾದ್ ರಾವ್ ಬಿಜೆಪಿ ಸೇರಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ ವರಿಷ್ಠರು ಹಲವು ಶಾಸಕರಿಗೆ ಟಿಕೆಟ್‌ ನಿರಾಕರಿಸಿದ್ದಾರೆ. 81 ವಿಧಾನಸಭೆ ಹಾಗೂ 18 ಲೋಕಸಭೆ ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳಿಗೆ ಅವಕಾಶ ನೀಡಿದ್ದಾರೆ. 175 ವಿಧಾನಸಭಾ ಸ್ಥಾನಗಳು ಮತ್ತು 25 ಲೋಕಸಭಾ ಸ್ಥಾನಗಳನ್ನು ಒಳಗೊಂಡಿರುವ ಆಂಧ್ರ ಪ್ರದೇಶ ವಿಧಾನಸಭೆಗೆ ಮೇ 13ರಂದು ಚುನಾವಣೆ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!