ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕರ್ನಾಟಕದ ಮಾರ್ಗರೇಟ್ ಆಳ್ವ ಸೋಲನ್ನುಕಂಡಿದ್ದಾರೆ.
ಇಂದು ಮುಂಜಾನೆಯಿಂದ ಮತದಾನ ನಡೆದಿದ್ದು, 528 ಮತಗಳನ್ನು ಪಡೆಯುವ ಮೂಲಕ ಧಂಕರ್ ಪ್ರಚಂಡ ಬಹುಮತದೊಂದಿಗೆ ಗೆದ್ದರು. 725 ಸಂಸದರು ತಮ್ಮ ಮತಗಳನ್ನು ಚಲಾಯಿಸಿದ್ದು, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಶೇ.92.9 ರಷ್ಟು ಮತದಾನವಾಗಿದೆ. ಆದರೆ, 15 ಮತಗಳು ಅಸಿಂಧುವಾಗಿವೆ ಎಂದು ಚುನಾವಣಾಧಿಕಾರಿ ಟಿ.ಕೆ.ವಿಶ್ವನಾಥನ್ ತಿಳಿಸಿದ್ದಾರೆ.
ಮಾರ್ಗರೇಟ್ ಆಳ್ವ ಅವರು 182 ಮತಗಳನ್ನು ಪಡೆದಿದ್ದಾರೆ.