ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ 14ನೇ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುರುವಾರ ಬೆಳಗ್ಗೆ 11:45ಕ್ಕೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೂ ಮುನ್ನ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಬಳಿಕ ರಾಷ್ಟ್ರಪತಿ ಭವನ ತಲುಪಲಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಂಸದರು ಹಾಗೂ ಇತರೆ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಇದೇ ತಿಂಗಳ 6ರಂದು ನಡೆದ ಚುನಾವಣೆಯಲ್ಲಿ ಎನ್ಡಿಎ ಪರವಾಗಿ ಸ್ಪರ್ಧಿಸಿದ್ದ ಜಗದೀಪ್ ಧನಖರ್ ಭಾರಿ ಬಹುಮತದಿಂದ ಗೆಲುವು ಸಾಧಿಸಿದರು. ಶೇ.74.36ರಷ್ಟು ಮತ ಪಡೆದು ವಿಜಯ ಸಾಧಸಿದರು. ರಾಜಸ್ಥಾನದ ಜುಂಜುನು ಜಿಲ್ಲೆಯ ಹಳ್ಳಿಯೊಂದರಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ಜಗದೀಪ್ ಧನಖರ್, ರಾಜಸ್ಥಾನ ವಿಶ್ವವಿದ್ಯಾನಿಲಯದಿಂದ LLB ಅಧ್ಯಯನ ಮಾಡಿದರು. ಮತ್ತು ಹಲವಾರು ವರ್ಷಗಳ ಕಾಲ ರಾಜಸ್ಥಾನ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ವಕೀಲರಾಗಿ ಕೆಲಸ ಮಾಡಿದರು.
1989 ರಲ್ಲಿ, ಜುಂಜುನು ಲೋಕಸಭೆ ಚುನಾವಣೆಯಲ್ಲಿ ಜನತಾದಳ ಪಕ್ಷದಿಂದ ಸಂಸದರಾಗಿ ಗೆದ್ದರು. ನಂತರ 1990 ರಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದರು. 1993 ರಲ್ಲಿ ಅವರು ಅಜ್ಮೀರ್ ಜಿಲ್ಲೆಯ ಕಿಶನ್ಗಢ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಜುಲೈ 17, 2019-2022 ರಿಂದ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಬಳಿಕ 2008ರಲ್ಲಿ ಬಿಜೆಪಿ ಸೇರಿದರು.