ರಾಹುಲ್ ಗಾಂಧಿ ತಪ್ಪೇ ಮಾಡಿಲ್ಲವೆಂದ ಮೇಲೆ ಪ್ರತಿಭಟನೆ ಏಕೆ? ಕಾಂಗ್ರೆಸ್ಸಿಗರಿಗೆ ಜಗದೀಶ ಶೆಟ್ಟರ ಪ್ರಶ್ನೆ

ಹೊಸದಿಗಂತ ವರದಿ, ಹುಬ್ಬಳ್ಳಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಪ್ಪು ಮಾಡಿಲ್ಲ ಎಂದರೆ ಕಾರ್ಯಕರ್ತರು ಏಕೆ ಪ್ರತಿಭಟನೆ ಮಾಡಬೇಕು. ಕಾಂಗ್ರೆಸ್ ಕಾರ್ಯಕರ್ತರ ಈ ನಡೆ ತಪ್ಪು ಮುಚ್ಚಿಕೊಳ್ಳುವ ಮತ್ತು ಜನರ ದಾರಿ ತಪ್ಪಿಸುವುದಾಗಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ವಾಗ್ದಾಳಿ ನಡೆಸಿದ್ದಾರೆ.
ಕಾನೂನು ವ್ಯಾಪ್ತಿಯಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಕಾರ್ಯ ನಿರ್ವಹಿಸುತ್ತದೆ. ಅವರಿಗೆ ದೊರೆತ ಮಾಹಿತ ಆಧಾರದ ಮೇಲೆ ತನಿಖೆ ಮಾಡುತ್ತಿದ್ದಾರೆ. ರಾಹುಲ್ ಗಾಂ ಇಡಿ ವಿಚಾರಣೆ ವೇಳೆ ಹಗರಣಕ್ಕೆ ಸಂಬಂಸಿದಂತೆ ಹಿಂದಿನ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ಎಲ್ಲೋ ಲೋಪ ಆಗಿದೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. ತಪ್ಪು ಮುಚ್ಚಿಕೊಳ್ಳಲು ಪ್ರತಿಭಟನೆ ನಾಟಕ ಮಾಡುತ್ತಿದೆ ಎಂದು ಹರಿಹಾಯ್ದರು.
ಕಾಂಗ್ರೆಸ್ 40-50 ವರ್ಷ ದೇಶದಲ್ಲಿ ಆಡಳಿತ ಮಾಡಿದೆ. ಆ ಅವಧಿಯಲ್ಲಿ ದೇಶವನ್ನು ಲೂಟಿ ಹೊಡೆದಿದ್ದಾರೆ. ಮನಮೋಹನ್ ಸಿಂಗ್ ಅವರ ಅವಯಲ್ಲಿ ಎಷ್ಟೊಂದು ಹಗರಣಗಳಾಗಿವೆ ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಧೀಮಂತ ಪ್ರಧಾನಿ ನರೇಂದ್ರ ಮೋದಿ ಒಂದು ಕಪ್ಪು ಚುಕ್ಕೆ ಇಲ್ಲದೇ ಆಡಳಿತ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ಹಗರಣಗಳು  ಇಲ್ಲದಿರುವುದರಿಂದ ಕಾಂಗ್ರೆಸ್‌ ಗೆ ಆರೋಪ ಮಾಡಲು ವಿಚಾರಗಳೇ ಸಿಗುತ್ತಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!