ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕೋರ್ಟ್ ಅವರಣದಲ್ಲಿ ನಡೆದ ವಕೀಲರ ಗಲಾಟೆ ಪ್ರಕರಣ ಸಂಬಂಧ ಬಂಧಿತರಾಗಿರುವ ವಕೀಲ ಜಗದೀಶ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ
ವಕೀಲ ಜಗದೀಶ್ ಅವರು ಕೋರ್ಟ್ ಆವರಣದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಮತ್ತು ಹೊರಗಡೆಯಿಂದ ಜನರನ್ನು ಕರೆತಂದು ಗೂಂಡಾವರ್ತನೆ ಮಾಡಿದ್ದಾರೆಂದು ಆರೋಪಿಸಿ ಶನಿವಾರ ವಕೀಲರ ಸಂಘದ ವಿವೇಕ್ ರೆಡ್ಡಿ ಅವರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಗದೀಶ್ ಅವರನ್ನು ಬಂಧಿಸಲಾಗಿತ್ತು.