ಗಲಾಟೆ ಪ್ರಕರಣ: ವಕೀಲ ಜಗದೀಶ್ ಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ಕೋರ್ಟ್ ಅವರಣದಲ್ಲಿ ನಡೆದ ವಕೀಲರ ಗಲಾಟೆ ಪ್ರಕರಣ ಸಂಬಂಧ ಬಂಧಿತರಾಗಿರುವ ವಕೀಲ ಜಗದೀಶ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ
ವಕೀಲ ಜಗದೀಶ್ ಅವರು ಕೋರ್ಟ್​ ಆವರಣದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಮತ್ತು ಹೊರಗಡೆಯಿಂದ ಜನರನ್ನು ಕರೆತಂದು ಗೂಂಡಾವರ್ತನೆ ಮಾಡಿದ್ದಾರೆಂದು​ ಆರೋಪಿಸಿ ಶನಿವಾರ ವಕೀಲರ ಸಂಘದ ವಿವೇಕ್​ ರೆಡ್ಡಿ ಅವರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಗದೀಶ್​ ಅವರನ್ನು ಬಂಧಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!