ಜೈ ಶ್ರೀ ರಾಮ್… ನಮ್ಮ ರಾಜ ಶ್ರೀರಾಮನ ಭವ್ಯ ದೇವಾಲಯ ಸಿದ್ಧವಾಗಿದೆ: ಪಾಕ್ ಮಾಜಿ ಕ್ರಿಕೆಟಿಗ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ (Ram Mandir Inauguration) ಉದ್ಘಾಟನೆಗೆ ದೇಶವೇ ಕಾತುರದಿಂದ ಕಾಯುತ್ತಿದ್ದು, ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ.

ಈ ನಡುವೆ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲೂ ರಾಮನ ಜಪ ಶುರುವಾಗಿದ್ದು, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ (Danish Kaneria) ಕೂಡ ಕೇಸರಿ ಧ್ವಜ ಹಿಡಿದು ಜೈ ಶ್ರೀ ರಾಮ್ ಘೋಷಣೆಯೊಂದಿಗೆ ರಾಮ ಮಂದಿರಕ್ಕೆ ಭೇಟಿ ನೀಡಲು ಉತ್ಸುಕರಾಗಿದ್ದಾರೆ.

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಜನವರಿ 14 ರಂದು ರಾಮ ಮಂದಿರದ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು, ರಾಮನನ್ನು ಕಣ್ತುಂಬಿಕೊಳ್ಳುವ ಇರಾದೆಯನ್ನು ವ್ಯಕ್ತಪಡಿಸಿದ್ದಾರೆ. ಕನೇರಿಯಾ ತಮ್ಮ ಕೈಯಲ್ಲಿ ಕೇಸರಿ ಬಣ್ಣದ ಧ್ವಜ ಹಿಡಿದಿರುವ ಫೋಟೋವನ್ನು ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ‘ನಮ್ಮ ರಾಜ ಶ್ರೀರಾಮನ ಭವ್ಯ ದೇವಾಲಯ ಸಿದ್ಧವಾಗಿದೆ. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ಕೆ ಕೇವಲ 8 ದಿನಗಳು ಮಾತ್ರ ಬಾಕಿ ಉಳಿದಿದೆ. ಜೈ-ಜೈ ಶ್ರೀ ರಾಮ್’ ಎಂದು ಆ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಹಲವು ವರ್ಷಗಳ ಕಾಲ ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಆಡಿದ್ದ ಡ್ಯಾನಿಶ್ ಕನೇರಿಯಾ ಹಿಂದೂ ಧರ್ಮಕ್ಕೆ ಸೇರಿದವರು. ಅವರು ಹಲವು ಬಾರಿ ಪೂಜೆ ಪುನಸ್ಕಾರದಲ್ಲಿ ತೊಡಗಿರುವುದನ್ನು ನಾವು ನೋಡಿದ್ದೇವೆ. ವಾಸ್ತವವಾಗಿ ಡ್ಯಾನಿಶ್ ಜೈ ಶ್ರೀರಾಮ್ ಎಂದು ಹೇಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಹಿಂದುತ್ವ ಪ್ರಚಾರಕ್ಕೆ ಹಲವು ಬಾರಿ ಪ್ರಯತ್ನಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!