ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರವಾಗಿ ಹತ್ಯೆಗೊಳಗಾಗಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಅಂತ್ಯಸಂಸ್ಕಾರ ಇಂದು ನಡೆಯಲಿದೆ.
ಜೈನಮುನಿಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ 10.30 ಕ್ಕೆ ಹಿರೇಕೋಡಿಗೆ ಗ್ರಾಮದ ನಂದಿಪರ್ವತ ಆಶ್ರಮದ ಆವರಣದಲ್ಲಿ ಜೈನ ಸಂಪ್ರದಾಯದಂತೆ ಜೈನಮುನಿ ಸ್ವಾಮೀಜಿಗಳ ಅಂತ್ಯ ಸಂಸ್ಕಾರ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಜೈನ ಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಬಾಗ ತಾಲೂಕಿನ ಕಾಟಕಬಾವಿ ಗ್ರಾಮದ ನಾರಾಯಣ ಮಾಳಿ ಮತ್ತು ಹಸನ್ ಡಾಲಾಯತ್ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿ 4 ಗಂಟೆಗೊಳಗಾಗಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿದಿದೆ.