ಹೊಸದಿಗಂತ ಡಿಜಿಟಲ್ ಡೆಸ್ಕ್
ದಿ.ನಟ, ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಈಗಾಗ್ಲೇ ತೆರೆ ಮೇಲೆ ಸದ್ದು ಮಾಡುತ್ತಿದ್ದು, ಇದೀಗ ಎದ್ದಿರುವ ಜೇಮ್ಸ್ ಸಿನಿಮಾ ವಿವಾದದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ, ‘ಜೇಮ್ಸ್ ಸಿನಿಮಾ ವಿವಾದದ ಬಗ್ಗೆ ಫಿಲಂ ಚೇಂಬರ್ ಜೊತೆ ಮಾತನಾಡಿದ್ದೇನೆ, ನಟ ಶಿವರಾಜ್ ಕುಮಾರ್ ಜೊತೆ ಕೂಡ ಮಾತನಾಡಿದ್ದೇನೆ. ಏನೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತಂದು ಸರಿಪಡಿಸಲು ಸೂಚನೆ ನೀಡಿದ್ದೇನೆ, ಅನಗತ್ಯವಾಗಿ ಜೇಮ್ಸ್ ಸಿನಿಮಾ ತೆಗೆಯುವಂತಿಲ್ಲ ಎಂದಿದ್ದಾರೆ.
ಸಂಬಂಧಪಟ್ಟ ವಿತರಕರು, ನಿರ್ಮಾಪಕರಿಗೆ ಅಧಿಕಾರವಿದೆ. ನೀವೇ ಇದನ್ನು ಸರಿಮಾಡಬೇಕು. ಬಿಜೆಪಿ ಶಾಸಕರು ಎತ್ತಂಗಡಿ ಮಾಡಿಸುತ್ತಿದ್ದಾರೆ ಎಂಬುದು ಸುಳ್ಳು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.