ಪ್ರಧಾನಿ ಮೋದಿಯನ್ನು ಭೇಟಿಯಾದ ಜಮ್ಮು-ಕಾಶ್ಮೀರದ ಸಿಎಂ ಒಮರ್‌ ಅಬ್ದುಲ್ಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್‌ ಅಬ್ದುಲ್ಲಾ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.

ದೆಹಲಿಯ ಪ್ರಧಾನಿ ನಿವಾಸದಲ್ಲಿಂದು ಮೋದಿ ಭೇಟಿಯಾದ ಒಮರ್‌ ಅಬ್ಲುಲ್ಲಾ ಅವರು ಉಗ್ರರ ದಾಳಿ ಹಾಗೂ ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದ್ದಾರೆ.

ಜಮ್ಮು-ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಕಳೆದ ಏ.22ರಂದು ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು ಸೇರಿ 26 ಮಂದಿ ಬಲಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!