ಶ್ರೀನಗರದಲ್ಲಿ ಎನ್‌ ಕೌಂಟರ್:‌ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿನ ಜಕುರಾದಲ್ಲಿ ಇಂದು ಬೆಳಗ್ಗೆ ಭಾರತೀಯ ಸೇನಾಪಡೆ ಎನ್‌ ಕೌಂಟರ್‌ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಮ್ಮು ಪೊಲೀಸರು, ಜಕುರಾ ಪ್ರದೇಶದಲ್ಲಿ ನಡೆದ ಎನ್‌ ಕೌಂಟರ್‌ ನಲ್ಲಿ ಲಷ್ಕರ್‌ ಇ ತೋಯ್ಬಾದ ಟಿಆರ್‌ ಎಫ್‌ ನ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಅದರಲ್ಲಿ ಒಬ್ಬ ಉಗ್ರನನ್ನು ಇಖ್ಲಾಕ್‌ ಹಜಂ ಎಂದು ಗುರುತಿಸಲಾಗಿದೆ. ಈತ ಇತ್ತೀಚೆಗೆ ಅನಂತ್‌ ನಾಗ್‌ ನಲ್ಲಿ ನಡೆದ ಹೆಡ್‌ ಕಾನ್‌ ಸ್ಟೇಬಲ್‌ ಅಲಿ ಮೊಹಮದ್‌ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದ್ದಾರೆ.
ಎನ್‌ ಕೌಂಟರ್‌ ನಡೆದ ಸ್ಥಳದಲ್ಲಿ ಎರಡು ಪಿಸ್ತೂಲ್‌ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!