ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರ ಹಿಂದೆ ಇಂದು ಮತ್ತು ನಾಳೆ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗ. ಕೂಡಲೇ ಪಾಕ್ ಆಕ್ರಮಿತ ಕಾಶ್ಮೀರವನ್ನು ತೆರವುಗೊಳಿಸಲೇಬೇಕು ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಹೇಳಿದೆ.
ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಗಳಲ್ಲಿ ಹೊಂದಾಣಿಕೆಯನ್ನು ಹೆಚ್ಚಿಸುವ ಕುರಿತು ಭದ್ರತಾ ಮಂಡಳಿಯ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ.
ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಅಕ್ರಮಿಸಿಕೊಂಡಿದೆ. ಅದನ್ನು ತೆರವುಗೊಳಿಸಲೇಬೇಕು. ಪುನರಾವರ್ತಿತ ಉಲ್ಲೇಖಗಳು ಪಾಕಿಸ್ತಾನದ ಕಾನೂನುಬಾಹಿರ ಹಕ್ಕುಗಳನ್ನು ದೃಢೀಕರಿಸುವುದಿಲ್ಲ ಅಥವಾ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.