ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ವಿರುದ್ಧ ಯುದ್ದ ಮಾಡುವಂತೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿರುವ ಒಮರ್ ಅಬ್ದುಲ್ಲಾ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಯೋತ್ಪಾದನೆ ಮತ್ತು ಅದರ ಮೂಲದ ವಿರುದ್ಧ ನಿರ್ಣಾಯಕ ಹೋರಾಟ ನಡೆಯಬೇಕು.ಕಾಶ್ಮೀರದ ಜನರು ಭಯೋತ್ಪಾದನೆ ಮತ್ತು ಅಮಾಯಕರ ಹತ್ಯೆಯ ವಿರುದ್ಧ ಮುಕ್ತವಾಗಿ ಮತ್ತು ಸ್ವಯಂಪ್ರೇರಿತವಾಗಿ ಧ್ವನಿಯೆತ್ತಿದ್ದಾರೆ. ಹಾಗಾಗಿ, ಈ ಬೆಂಬಲವನ್ನು ಬಳಸಿಕೊಂಡು, ಜನರನ್ನು ದೂರವಿಡುವ ಯಾವುದೇ ತಪ್ಪು ಕ್ರಮವನ್ನು ತಪ್ಪಿಸುವ ಸಮಯ ಇದು. ತಪ್ಪಿತಸ್ಥರನ್ನು ಶಿಕ್ಷಿಸಿ, ಅವರಿಗೆ ಯಾವುದೇ ಕರುಣೆ ತೋರಬೇಡಿ, ಆದರೆ ಅಮಾಯಕ ಜನರು ಪಾರ್ಶ್ವ ಹಾನಿಗೆ ಒಳಗಾಗದಂತೆ ಎಚ್ಚರಿಕೆ ವಹಿಸಿ ಎಂದು ಹೇಳಿದ್ದಾರೆ.