ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
ಆಸ್ತಿ ಜಪ್ತಿಗೆ ಅನುಮತಿ ಕೋರಿ ಕರ್ನಾಟಕ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿದೆ. 2022ರ ಆಗಸ್ಟ್ 30ರಂದೇ ಅರ್ಜಿ ಸಲ್ಲಿಸಿದರೂ ಸರ್ಕಾರ ಅನುಮತಿ ನೀಡಿಲ್ಲ. ಈ ವಿಚಾರ ತಿಳಿದ ಜನಾರ್ದನ ರೆಡ್ಡಿ ಆಸ್ತಿ ಮಾರಾಟ ಮಾಡುತ್ತಿದ್ದಾರೆ. ಕರ್ನೂಲ್ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ಇರುವ ಆಸ್ತಿ ಮಾರಾಟಕ್ಕೆ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಸಿಬಿಐ ಮನವಿ ಮಾಡಿದೆ.
65 ಕೋಟಿ ರೂ. ಮೌಲ್ಯದ ಆಸ್ತಿ ಜಪ್ಪಿಗೆ ಸಿಬಿಐನಿಂದ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.