ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರ ಸ್ಥಗಿತ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿ ರಾಜ್ಯ ಸರ್ಕಾರದ ಆದೇಶ ನೀಡಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್​ ಮೆಟ್ಟಿಲೇರಿದ್ದು, ಇಂದು (ಜುಲೈ 08) ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ,ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ಹೊರಡಿಸಿದೆ.

ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇ.50ರಿಂದ ಶೇ.90ರ ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ತಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!